Home Latest Newsಹಾಸನ ದುರಂತಕ್ಕೆ ಮೋದಿ ಕಂಬನಿ.. ಪರಿಹಾರ ಘೋಷಣೆ

ಹಾಸನ ದುರಂತಕ್ಕೆ ಮೋದಿ ಕಂಬನಿ.. ಪರಿಹಾರ ಘೋಷಣೆ

by admin
0 comments

ಹಾಸನ: ಗಣಪತಿ ವಿಸರ್ಜನೆ ವೇಳೆ ನಡೆಯಬಾರದ ಘನಘೋರ ದುರಂತ ನಡೆದು ಹೋಗಿದೆ. ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಅದ್ಧೂರಿ ಗಣೇಶ ಮೆರವಣಿಗೆ ಸಾ*ವಿನ ಮೆರವಣಿಗೆಯಾಗಿ ಬದಲಾಗಿದೆ. ಡಿಜೆ ಸೌಂಡ್​​ನಲ್ಲಿ ಸಖತ್ ಸ್ಟೆಪ್ ಹಾಕುತ್ತಿದ್ದವರ ಮೇಲೆ ಯಮಸ್ವರೂಪಿಯಾಗಿ ಬಂದ ಟ್ರಕ್ 9 ಜನರನ್ನ ಬಲಿ ಪಡೆದಿದೆ.

ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು.  ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ದುರಂತಕ್ಕೆ ಬೈಕ್​ ಸವಾರ ಬೇಕಾಬಿಟ್ಟಿ ಅಡ್ಡ ಬಂದಿದ್ದು ಹಾಗೂ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಸಿಟ್ಟಿಗೆದ್ದ ಸ್ಥಳೀಯರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಪಘಾತ ಮಾಡಿದ ವಾಹನ ಮಹಾರಾಷ್ಟ್ರ ನೋಂದಣಿ ಹೊಂದಿದ್ದು ಚಾಲಕ ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಭುವನೇಶ್​ ಕೂಡ ಗಾಯಗೊಂಡಿದ್ದಾನೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಲಾರಿ ಚಾಲಕನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

Have any thoughts?

Share your reaction or leave a quick response — we’d love to hear what you think!

You may also like